25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಫೆ.3 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ, ಕಾರ್ಯದರ್ಶಿ ಕಿರಣ್ ಎಂ., ಪಂಚಾಯತ್‌ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ. ಸ್ವಾಗತಿಸಿದರು. ಪಂ. ಕಾರ್ಯದರ್ಶಿ ಕಿರಣ್ ಎಂ ಅನುಪಾಲನ ವರದಿ ಹಾಗೂ ವಾರ್ಡು ಸಭೆಯ ವಿವರ ನೀಡಿದರು. ಗುಮಾಸ್ತೆ ಭಾರತಿ ಜಮಾ-ಖರ್ಚು ವರದಿ ಬಗ್ಗೆ ವಿವರಿಸಿದರು.

Related posts

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya
error: Content is protected !!