25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!