September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಸರೋಜಿನಿ ನಾಯ್ಡು ರೇಂಜರ್ಸ್ ಘಟಕ ಹಾಗೂ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಎಂಬ ವಿಷಯದ ಕುರಿತು ಅರ್ಜುನ್ ಎಚ್. ಕೆ., ವೃತ್ತ ನಿರೀಕ್ಷಕರು, ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆ ಇವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.

ಹದಿಹರೆಯದ ವಯೋಮಾನದವರಲ್ಲಿ ರಸ್ತೆ ಸುರಕ್ಷತೆಯ ಅಗತ್ಯತೆ ಹಾಗೂ ಪೊಲೀಸ್ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣ ಮಾಡಿದ ಪ್ರಾಂಶುಪಾಲರು ಸುಕುಮಾರ ಜೈನ್ ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕು ಎಂಬ ಸಲಹೆಯನ್ನು ನೀಡಿದರು.

300 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ರೇಂಜರ್ಸ್ ವಿದ್ಯಾರ್ಥಿನಿಯರಾದ ಚಿಂತನ ಸ್ವಾಗತಿಸಿ, ಪ್ರಜ್ಞ ವಂದಿಸಿದರು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya
error: Content is protected !!