29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ರಹಮತ್ ಪೆರ್ದಾಡಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಮನೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ ನಿಜಾಮ್ ಗೇರುಕಟ್ಟೆ, ಪಂಚಾಯತ್ ಸದಸ್ಯರಾದ ಅಹ್ಮದ್ ಕಬೀರ್ ಹಾಗೂ ಮುಸ್ತಾಫ ಜಿ. ಕೆರೆ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಪೆರ್ದಾಡಿ ಖತೀಬರಾದ ಶರೀಫ್ ಸಹದಿ, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ರಫೀಕ್ ಕನ್ನಡಿ ಕಟ್ಟೆ, ಅಶ್ರಫ್ ಕಾಜೂರು, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya
error: Content is protected !!