25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ರಹಮತ್ ಪೆರ್ದಾಡಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಮನೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ ನಿಜಾಮ್ ಗೇರುಕಟ್ಟೆ, ಪಂಚಾಯತ್ ಸದಸ್ಯರಾದ ಅಹ್ಮದ್ ಕಬೀರ್ ಹಾಗೂ ಮುಸ್ತಾಫ ಜಿ. ಕೆರೆ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಪೆರ್ದಾಡಿ ಖತೀಬರಾದ ಶರೀಫ್ ಸಹದಿ, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ರಫೀಕ್ ಕನ್ನಡಿ ಕಟ್ಟೆ, ಅಶ್ರಫ್ ಕಾಜೂರು, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!