May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ಲಾಯಿಲ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ. 1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಶ್ರೀ ಗುರು ನಾರಾಯಣ ಸೇವಾ ಸಂಘ ಲಾಯಿಲ ಗ್ರಾಮದಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನುಫೆ. 2 ರಂದು ಆಯೋಜಿಸಲಾಗಿತ್ತು.


ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಅಧ್ಯಕ್ಷ ಲಾಯಿಲ ಜಿಲ್ಲಾ ಪಂಚಾಯತ್ ಕ್ಷೇತ್ರದ ವಲಯ ಸಂಚಾಲಕ ಲಕ್ಷ್ಮಣ ಪೂಜಾರಿಯವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .


ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.


ವೇದಿಕೆಯಲ್ಲಿ ಸಂಘ ದ ಗೌರವ ಸಲಹೆಗಾರರಾದ ಕೃಷ್ಣಪ್ಪ ಪೂಜಾರಿ, ಆನಂದ ಪೂಜಾರಿ ನಿನಿಕಲ್ಲು ಹಾಗೂ ಲಾಯಿಲ ಗ್ರಾಮದ ಹಲವಾರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ಗುರುನಾರಾಯಣ ಸೇವಾ ಸಂಘ ಲಾಯಿಲ ಇದರ ಗೌರವ ಸಲಹೆಗಾರರಾದ ಜಯಾನಂದ ಲಾಯಿಲ ಸ್ವಾಗತಿಸಿ, ಗುರು ನಾರಾಯಣ ಸೇವಾ ಸಂಘ ನಡ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಲಾಯಿಲ ಜಿಲ್ಲಾ ಪಂಚಾಯತ್ ವಲಯ ಸಂಚಾಲಕಿ ಶ್ರೀಮತಿ ಸೌಮ್ಯ ಲಾಯಿಲ ಧನ್ಯವಾದವಿತ್ತರು.

Related posts

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya
error: Content is protected !!