25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

ಕೊಕ್ಕಡ: ಕೊಕ್ಕಡದ ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ  ಕ್ಷೇತ್ರದಲ್ಲಿ ಫೆ  2 ರಂದು  ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ  ಬೆಳಿಗ್ಗೆ  108 ತೆಂಗಿನಕಾಯಿ ಗಣಪತಿ ಹವನ, ರಾತ್ರಿ  ವಾರ್ಷಿಕ ಮೂಡಪ್ಪ ಸೇವೆ  ಸಂಭ್ರಮ, ಸಡಗದಿಂದ ನಡೆಯಿತು.                                                             

ಮದ್ಯಾಹ್ನ  ಮಹಾಪೂಜೆ, ಪಲ್ಲಪೂಜೆ ನಡೆದು  ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತಾದಿಗಳು  ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.   ಶ್ರೀ ಮಹಾಗಣಪತಿ ಸನ್ನಿಧಿಯನ್ನು   ವಿಶೇಷವಾಗಿ ರಂಗೋಲಿ ಹಾಗು  ಪುಷ್ಪಾಲಂಕಾರದಿಂದ  ಸುಂದರವಾಗಿ   ಶೃಂಗರಿಸಲಾಗಿತ್ತು.  ಮಹಾಗಣಪತಿ ಹಿಂಭಾಗದಲ್ಲಿ ಕಬ್ಬಿನ  ಅಟ್ಟಳಿಗೆಯಲ್ಲಿ ಅಪ್ಪ ಪ್ರಸಾದ  ಸುರಿದು  ಪೇರಿಸಿ  ಮಹಾರಂಗಪೂಜೆ ಹಾಗು  ಮೂಡಪ್ಪ ಸೇವೆಯ  ಮಹಾಮಂಗಳಾರತಿ  ನೆರವೇರಿಸಲಾಯಿತು.  ಊರ ಪರವೂರ ಸಹಸ್ರಾರು ಭಕ್ತಾದಿಗಳು  ಸಂಭ್ರಮದ   ಮೂಡಪ್ಪ ಸೇವೆಯ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದರು.  ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. 

ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಹಾಗು ತೊಡ್ತಿಲ್ಲಾಯ  ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.  ಚೆಂಡೆ,ವಾದ್ಯಮೇಳ  ಮತ್ತು ಸುಡುಮದ್ದು ಪ್ರದರ್ಶನ  ವಿಶೇಷ  ಆಕರ್ಷಣೆಯಾಗಿತ್ತು. .   

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ  ಉಪ್ಪಿನಂಗಡಿಯ  ವಾಮನ್ ನಾಯಕ್  ನೇತೃತ್ವದಲ್ಲಿ ಹಾಗು ವಿವಿಧ ಭಜನಾ  ತಂಡಗಳಿಂದ   ಭಜನಾ ಸೇವೆ, ಮಂಗಳೂರಿನ ಸುವರ್ಣ ನೃತ್ಯ ತಂಡದ ಸೇವಾರ್ಥ   ಭರತನಾಟ್ಯ,  ಸಂಜೆ ಶ್ರೀ ಕ್ಷೇತ್ರ ಸೌತಡ್ಕದ ಶಿಶುಮಂದಿರದ  ವಿದ್ಯಾರ್ಥಿಗಳಿಂದ ಚಿಣ್ಣರ ಚಿಲಿಪಿಲಿ ,  ಪುತ್ತೂರಿನ ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ  ಭಕ್ತಿ ಗೀತೆಗಳ ಗಾಯನ ,ರಾತ್ರಿ ಮಂಜೇಶ್ವರ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರಿಂದ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ “ತುಳು  ಪೌರಾಣಿಕ ಹಾಗು ಭಕ್ತಿ ಪ್ರದಾನ  ನಾ ಟಕ  ಪ್ರದರ್ಶಿಸಲ್ಪಟ್ಟಿತು .

  ಬೆಳ್ತಂಗಡಿ ತಹಸೀಲ್ದಾರು, ಕ್ಷೇತ್ರದ ಆಡಳಿತಾಧಿಕಾರಿ  ಪೃಥ್ವಿ ಸಾನಿಕಮ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವ್ಯವಸ್ಥಾಪನಾ ಸಮಿತಿಯ ಮಾಜಿ ಪದಾಧಿಕಾರಿಗಳು ,  ತಾಲೂಕಿನ  ಸಹಸ್ರಾರು ಭಕ್ತಾದಿಗಳು ಭಕ್ತಿ,ಶ್ರದ್ಧೆಯಿಂದ  ಭಾಗವಹಿಸಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!