24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya
error: Content is protected !!