25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!