September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya
error: Content is protected !!