April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಫೆ.3 ರಂದು ನಡೆಸಲಾಯಿತು.


ರಾಜ್ಯ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಮಕ್ಕಳನ್ನು ಸಂಸ್ಕೃತ ನಾಗರಿಕರನ್ನಾಗಿಸುವಲ್ಲಿ ಪೋಷಕರ ಪಾತ್ರ ಹಿರಿದಾಗಿದೆ” ಎಂದರು.


“ವಿದ್ಯಾರ್ಥಿಗಳ ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಚಿಂತೆ ಬೇಡ ಚಿಂತನೆ ಅಗತ್ಯ, ನಿರಂತರ ಅಧ್ಯಯನ ಯಶಸ್ಸಿನ ಗುಟ್ಟು ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು.


“ಮಗುವಿನ ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಮನಸ್ಸು ಮುಖ್ಯ. ಏಕಾಗ್ರತೆ ಶ್ರದ್ಧೆ, ನಂಬಿಕೆ ಮತ್ತು ಛಲದಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಾಧ್ಯ” ಎಂದರು.


ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿಯಾದ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿ, ಶಿಕ್ಷಕಿ ದಿವ್ಯ ರವರು ನಿರೂಪಿಸಿ, ವಂದಿಸಿದರು.

Related posts

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!