July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಫೆ.3 ರಂದು ನಡೆಸಲಾಯಿತು.


ರಾಜ್ಯ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಮಕ್ಕಳನ್ನು ಸಂಸ್ಕೃತ ನಾಗರಿಕರನ್ನಾಗಿಸುವಲ್ಲಿ ಪೋಷಕರ ಪಾತ್ರ ಹಿರಿದಾಗಿದೆ” ಎಂದರು.


“ವಿದ್ಯಾರ್ಥಿಗಳ ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಚಿಂತೆ ಬೇಡ ಚಿಂತನೆ ಅಗತ್ಯ, ನಿರಂತರ ಅಧ್ಯಯನ ಯಶಸ್ಸಿನ ಗುಟ್ಟು ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು.


“ಮಗುವಿನ ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಮನಸ್ಸು ಮುಖ್ಯ. ಏಕಾಗ್ರತೆ ಶ್ರದ್ಧೆ, ನಂಬಿಕೆ ಮತ್ತು ಛಲದಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಾಧ್ಯ” ಎಂದರು.


ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿಯಾದ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿ, ಶಿಕ್ಷಕಿ ದಿವ್ಯ ರವರು ನಿರೂಪಿಸಿ, ವಂದಿಸಿದರು.

Related posts

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya
error: Content is protected !!