February 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಧರಣೇಂದ್ರ ಕೆ ಇವರ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

ಈ ತಂಡದಲ್ಲಿ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಧರಣೇಂದ್ರ ಕೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕಳ್ತೂರು ಸಂತೆಕಟ್ಟೆಯ ಮನೋಹರ ಹೆಗ್ಡೆ, ಕೊಲ್ಲೂರು ಮೂಕಾಂಬಿಕ ಪ್ರೌಢಶಾಲೆ ಬೀಸಿನಪಾರೆಯ ರಾಜೀವ ಶೆಟ್ಟಿ ಅದೇ ರೀತಿ ಮಹಿಳಾ ವಿಭಾಗದಲ್ಲಿ ಶ್ರೀಮತಿ ಕಸ್ತೂರಿ ಹೆಚ್ ಆರ್, ಸರಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಮಂಗಳೂರಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮತ್ತು ಠೇವಣಿ ವಿಭಾಗದಲ್ಲಿ ನಿತ್ಯಾನಂದ ಶೆಟ್ಟಿ, ಸಹ ಶಿಕ್ಷಕ, ರಾಯ್ಸನ್ ಸರಕಾರಿ ಪ್ರೌಢಶಾಲೆ, ಕಂಡೂರು, ಕುಂದಾಪುರ ಉಡುಪಿ ಇವರು ಆಯ್ಕೆಯಾಗಿರುತ್ತಾರೆ. ಆಯ್ಕೆಯಾಗಿರುವ ಐದು ಜನರು ಕೂಡ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಬಂಧಿಸಿದ ಈ ವಿಭಾಗದ ಚುನಾವಣಾ ಮುಖ್ಯಸ್ಥರು ತಿಳಿಸಿರುತ್ತಾರೆ.


ಇವರೆಲ್ಲರೂ ಕೂಡ ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡವರಾಗಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರ ವ್ಯವಹಾರಿಕ ವಿಚಾರಕ್ಕೂ ಕೂಡ ಸ್ಪಂದಿಸಲಿ ಎಂದು ಸರ್ವಶಿಕ್ಷಕರು ಕೂಡ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.

Related posts

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!