23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಧರಣೇಂದ್ರ ಕೆ ಇವರ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

ಈ ತಂಡದಲ್ಲಿ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಧರಣೇಂದ್ರ ಕೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕಳ್ತೂರು ಸಂತೆಕಟ್ಟೆಯ ಮನೋಹರ ಹೆಗ್ಡೆ, ಕೊಲ್ಲೂರು ಮೂಕಾಂಬಿಕ ಪ್ರೌಢಶಾಲೆ ಬೀಸಿನಪಾರೆಯ ರಾಜೀವ ಶೆಟ್ಟಿ ಅದೇ ರೀತಿ ಮಹಿಳಾ ವಿಭಾಗದಲ್ಲಿ ಶ್ರೀಮತಿ ಕಸ್ತೂರಿ ಹೆಚ್ ಆರ್, ಸರಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಮಂಗಳೂರಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮತ್ತು ಠೇವಣಿ ವಿಭಾಗದಲ್ಲಿ ನಿತ್ಯಾನಂದ ಶೆಟ್ಟಿ, ಸಹ ಶಿಕ್ಷಕ, ರಾಯ್ಸನ್ ಸರಕಾರಿ ಪ್ರೌಢಶಾಲೆ, ಕಂಡೂರು, ಕುಂದಾಪುರ ಉಡುಪಿ ಇವರು ಆಯ್ಕೆಯಾಗಿರುತ್ತಾರೆ. ಆಯ್ಕೆಯಾಗಿರುವ ಐದು ಜನರು ಕೂಡ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಬಂಧಿಸಿದ ಈ ವಿಭಾಗದ ಚುನಾವಣಾ ಮುಖ್ಯಸ್ಥರು ತಿಳಿಸಿರುತ್ತಾರೆ.


ಇವರೆಲ್ಲರೂ ಕೂಡ ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡವರಾಗಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರ ವ್ಯವಹಾರಿಕ ವಿಚಾರಕ್ಕೂ ಕೂಡ ಸ್ಪಂದಿಸಲಿ ಎಂದು ಸರ್ವಶಿಕ್ಷಕರು ಕೂಡ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.

Related posts

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!