September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಧರಣೇಂದ್ರ ಕೆ ಇವರ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

ಈ ತಂಡದಲ್ಲಿ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಧರಣೇಂದ್ರ ಕೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕಳ್ತೂರು ಸಂತೆಕಟ್ಟೆಯ ಮನೋಹರ ಹೆಗ್ಡೆ, ಕೊಲ್ಲೂರು ಮೂಕಾಂಬಿಕ ಪ್ರೌಢಶಾಲೆ ಬೀಸಿನಪಾರೆಯ ರಾಜೀವ ಶೆಟ್ಟಿ ಅದೇ ರೀತಿ ಮಹಿಳಾ ವಿಭಾಗದಲ್ಲಿ ಶ್ರೀಮತಿ ಕಸ್ತೂರಿ ಹೆಚ್ ಆರ್, ಸರಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಮಂಗಳೂರಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮತ್ತು ಠೇವಣಿ ವಿಭಾಗದಲ್ಲಿ ನಿತ್ಯಾನಂದ ಶೆಟ್ಟಿ, ಸಹ ಶಿಕ್ಷಕ, ರಾಯ್ಸನ್ ಸರಕಾರಿ ಪ್ರೌಢಶಾಲೆ, ಕಂಡೂರು, ಕುಂದಾಪುರ ಉಡುಪಿ ಇವರು ಆಯ್ಕೆಯಾಗಿರುತ್ತಾರೆ. ಆಯ್ಕೆಯಾಗಿರುವ ಐದು ಜನರು ಕೂಡ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಬಂಧಿಸಿದ ಈ ವಿಭಾಗದ ಚುನಾವಣಾ ಮುಖ್ಯಸ್ಥರು ತಿಳಿಸಿರುತ್ತಾರೆ.


ಇವರೆಲ್ಲರೂ ಕೂಡ ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡವರಾಗಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರ ವ್ಯವಹಾರಿಕ ವಿಚಾರಕ್ಕೂ ಕೂಡ ಸ್ಪಂದಿಸಲಿ ಎಂದು ಸರ್ವಶಿಕ್ಷಕರು ಕೂಡ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya
error: Content is protected !!