22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!