23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!