25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya
error: Content is protected !!