September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya
error: Content is protected !!