September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

ಬೆಳ್ತಂಗಡಿ: ಮೊಗ್ರು ಗ್ರಾಮ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರು ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದನ್ನು ಮನಗಂಡು ಶಾಲೆಯನ್ನು ಉನ್ನತೀಕರಿಸಿ, ಆಧುನಿಕ ಸೌಲಭ್ಯವನ್ನು ಒದಗಿಸುವ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್‌ನ್ನು ಸ್ಥಾಪನೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇಲ್ಲಿಗೆ ಶಾಲೆಯನ್ನು ಅಭಿವೃದ್ದಿ ಮಾಡುವ ಪ್ರಸ್ತಾವ ಸಲ್ಲಿಸಲಾಯಿತು. ಟ್ರಸ್ಟ್‌ನ ಮನವಿಯನ್ನು ಪುರಸ್ಕರಿಸಿ ಶಾಲಾ ದತ್ತು ಸ್ವೀಕಾರ ಅಧಿನಿಯಮದಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ ಹಾಗೂ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಬೆಳ್ತಂಗಡಿ ನಡುವೆ ಜ.18 ರಂದು ಕರಾರು ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಕರಾರು ಒಪ್ಪಂದದಂತೆ ಮು.ಸ.ಸಾ.ಸೇ ಟ್ರಸ್ಟ್ 2025-2026 ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ವಿದ್ಯಾರ್ಥಿಗಳ ಪ್ರವೇಶ ಪ್ರೋತ್ಸಾಹಿಸುವುದರೊಂದಿಗೆ ಸರಕಾರದಿಂದ ಶಿಕ್ಷಣಕ್ಕೆ ಸಿಗುವ ಉಚಿತ ಸೌಲಭ್ಯವನ್ನು ಮಾಹಿತಿ ನೀಡುವುದರೊಂದಿಗೆ ಟ್ರಸ್ಟ್‌ನ ಪ್ರಾಯೋಜಕತ್ವದಲ್ಲಿ 2 ಆಂಗ್ಲ ಮಾಧ್ಯಮ ಭೋದನೆಗೆ 2 ಶಿಕ್ಷಕ/ಕಿಯರನ್ನು ನೇಮಿಸುವ ಆಧುನಿಕ ತಂತ್ರಜ್ಙಾನದ ಡಿಜಿಟಲ್ ಶಿಕ್ಷಣ ಸಾಮಾಗ್ರಿ ಒದಗಿಸುವುದು.

ಶಾಲಾ ವಾತಾವರಣದಲ್ಲಿ ಆಟದ ಸಾಮಾಗ್ರಿ ಒದಗಿಸುವುದು, ಶಾಲೆಗೆ ಬೇಕಾದ ಪಿಠೋಪಕರಣ ಹಾಗೂ ಶೈಕ್ಷಣಿಕ ಸಾಮಾಗ್ರಿ ಒದಗಿಸುವುದು, ಶಾಲಾ ಪರಿಸರದಲ್ಲಿ ತರಕಾರಿ ತೋಟ ಮಾಡುವುದುದರೊಂದಿಗೆ, ಶಾಲಾ ಮಕ್ಕಳ ಪ್ರಯಾಣಕ್ಕೆ ಅನುಕೂಲವಾಗುವಂತೆ ವಾಹಾನ ವ್ಯವಸ್ಥೆಯನ್ನು ಒದಗಿಸುವುದರೊಂದಿಗೆ, ಯೋಗ, ಕ್ರೀಡೆ, ಸಾಂಸ್ಕೃತಿಕ ತರಭೇತಿ ಇನ್ನೀತರ ಸೌಲಭ್ಯದೊಂದಿಗೆ ಟ್ರಸ್ಟ್ ಸ,ಕಿ,ಪ್ರಾ.ಶಾಲೆ ಮೊಗ್ರು ಇದರ ಸರ್ವಾಂಗಿನ ಅಭಿವೃದ್ದಿಗೆ ಕಾರ್ಯ ನಿರ್ವಹಿಸಬಹುದು ಎಂದು ಒಪ್ಪಂದ ಕರಾರಿನಲ್ಲಿ ಉಲ್ಲೇಖಿಸಲಾಯಿತ್ತು.

ಕರಾರು ಒಪ್ಪಂದ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೆಳ್ತಂಗಡಿ ಇದರ ಬಿ.ಇ.ಒ ಶ್ರೀಮತಿ ತಾರಾಕೇಸರಿ ಕಛೇರಿ ವ್ಯವಸ್ಥಾಪಕ ನರೇಶ್ ನಾಯ್ಕ ಮು.ಸ.ಶಾ.ಸೇ.ಟ್ರಸ್ಟ್‌ನ ಅಧ್ಯಕ್ಷ ಕುಶಾಲಪ್ಪ ಗೌಡ ನೆಕ್ಕಾರಜೆ, ಜೊತೆ ಕಾರ್ಯದರ್ಶಿ ಉಮೇಶ ಗೌಡ ಪರಕ್ಕಜೆ ಉಪಸ್ಥಿತರಿದ್ದರು.

Related posts

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya
error: Content is protected !!