April 21, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್‌ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರಿ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ, ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ನಿವೃತ್ತ ಉಪಪ್ರಾಂಶುಪಾಲರು ದಿವಾಕರ ಆಚಾರ್ಯ, ಗೇರುಕಟ್ಟೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಎಂ., ವೈದ್ಯರು ಡಾ. ಅನಂತ ಭಟ್ ಗೇರುಕಟ್ಟೆ, ಗೇರುಕಟ್ಟೆಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆ ಉಪಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ, ಶ್ರೀಮತಿ ಪ್ರೇಮ ಶೆಟ್ಟಿ, ಗೇರುಕಟ್ಟೆ ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಪಿ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ಗೇರುಕಟ್ಟೆ ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಿದ್ದರು.

Related posts

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!