25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್‌ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರಿ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ, ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ನಿವೃತ್ತ ಉಪಪ್ರಾಂಶುಪಾಲರು ದಿವಾಕರ ಆಚಾರ್ಯ, ಗೇರುಕಟ್ಟೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಎಂ., ವೈದ್ಯರು ಡಾ. ಅನಂತ ಭಟ್ ಗೇರುಕಟ್ಟೆ, ಗೇರುಕಟ್ಟೆಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆ ಉಪಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ, ಶ್ರೀಮತಿ ಪ್ರೇಮ ಶೆಟ್ಟಿ, ಗೇರುಕಟ್ಟೆ ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಪಿ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ಗೇರುಕಟ್ಟೆ ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!