February 4, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್‌ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರಿ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ, ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ನಿವೃತ್ತ ಉಪಪ್ರಾಂಶುಪಾಲರು ದಿವಾಕರ ಆಚಾರ್ಯ, ಗೇರುಕಟ್ಟೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಎಂ., ವೈದ್ಯರು ಡಾ. ಅನಂತ ಭಟ್ ಗೇರುಕಟ್ಟೆ, ಗೇರುಕಟ್ಟೆಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆ ಉಪಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ, ಶ್ರೀಮತಿ ಪ್ರೇಮ ಶೆಟ್ಟಿ, ಗೇರುಕಟ್ಟೆ ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಪಿ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ಗೇರುಕಟ್ಟೆ ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಿದ್ದರು.

Related posts

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!