23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ 2025 ರಿಂದ 2030 ರವರೆಗಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು ಪ್ರೌಢಶಾಲಾ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಧರಣೇಂದ್ರ ಕೆ ಇವರ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ಜಯಶಾಲಿಗಳಾಗಿದ್ದಾರೆ.

ಈ ತಂಡದಲ್ಲಿ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಧರಣೇಂದ್ರ ಕೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕಳ್ತೂರು ಸಂತೆಕಟ್ಟೆಯ ಮನೋಹರ ಹೆಗ್ಡೆ, ಕೊಲ್ಲೂರು ಮೂಕಾಂಬಿಕ ಪ್ರೌಢಶಾಲೆ ಬೀಸಿನಪಾರೆಯ ರಾಜೀವ ಶೆಟ್ಟಿ ಅದೇ ರೀತಿ ಮಹಿಳಾ ವಿಭಾಗದಲ್ಲಿ ಶ್ರೀಮತಿ ಕಸ್ತೂರಿ ಹೆಚ್ ಆರ್, ಸರಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಮಂಗಳೂರಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಮತ್ತು ಠೇವಣಿ ವಿಭಾಗದಲ್ಲಿ ನಿತ್ಯಾನಂದ ಶೆಟ್ಟಿ, ಸಹ ಶಿಕ್ಷಕ, ರಾಯ್ಸನ್ ಸರಕಾರಿ ಪ್ರೌಢಶಾಲೆ, ಕಂಡೂರು, ಕುಂದಾಪುರ ಉಡುಪಿ ಇವರು ಆಯ್ಕೆಯಾಗಿರುತ್ತಾರೆ. ಆಯ್ಕೆಯಾಗಿರುವ ಐದು ಜನರು ಕೂಡ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಬಂಧಿಸಿದ ಈ ವಿಭಾಗದ ಚುನಾವಣಾ ಮುಖ್ಯಸ್ಥರು ತಿಳಿಸಿರುತ್ತಾರೆ.


ಇವರೆಲ್ಲರೂ ಕೂಡ ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಂಡವರಾಗಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರ ವ್ಯವಹಾರಿಕ ವಿಚಾರಕ್ಕೂ ಕೂಡ ಸ್ಪಂದಿಸಲಿ ಎಂದು ಸರ್ವಶಿಕ್ಷಕರು ಕೂಡ ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!