23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

ಬೆಳ್ತಂಗಡಿ : ಗೇರುಕಟ್ಟೆ ತೋಟದ ಕೆರೆಯಲ್ಲಿ 22-10-2024 ರಂದು ಅಪರಿಚಿತ ಶವ ಪತ್ತೆಯಾದ ಸಂಬಂಧಿಸಿದಂತೆ ಡಿಎನ್ಎ ಮೂಲಕ ಮೃತನ ಗುರುತು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದು. ಇದೀಗ ಎಸಿ ಹಾಗೂ ಪೊಲೀಸರ ಸಮ್ಮುಖದಲ್ಲಿ ದಫನ ಮಾಡಿದ್ದ ಮೃತದೇಹವನ್ನು ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಸ್ಮಶಾನದಲ್ಲಿ ಪೊಲೀಸರು ಉಮರ್ ಫಾರೂಕ್ ಶವವನ್ನು 23-10-2024 ರಂದು ದಫನ ಮಾಡಿದ್ದ ಉಮರ್ ಫಾರೂಕ್ ಮೃತದೇಹವನ್ನು ಫೆ.4 ರಂದು ಬೆಳಗ್ಗೆ ಪುತ್ತೂರು ಎಸಿ ಶ್ರವಣ್ ಕುಮಾರ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಹಿಟಾಚಿ ಮೂಲಕ ಮಣ್ಣನ್ನು ಅಗೆದು ನಂತರ ಮೃತದೇಹವನ್ನು ಹೊರಗಡೆ ತೆಗೆದು ಮಹಜರು ಮಾಡಿ ನಂತರ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ನಂತರ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ಮೃತದೇಹ ತೆಗೆದುಕೊಂಡು ಹೋಗಿ ಪರಪ್ಪು ಮಸೀದಿಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ದಫನ ಕಾರ್ಯ ನಡೆಸಿದ್ದಾರೆ.

ಪುತ್ತೂರು ಎಸಿ ಶ್ರವಣ್ ಕುಮಾರ್, ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ, ಪ್ರೋಪೆಷನರಿ ಐಪಿಎಸ್ ಮನಿಷಾ ಮನೋಹಿ, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ, ಬೆಳ್ತಂಗಡಿ ಟಿಹೆಚ್ಓ ಸಂಜೀತ್ ಹೆಗ್ಡೆ, ಆರ್.ಐ ಪವಡಪ್ಪ, ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳೀಧರ್ ನಾಯ್ಕ್, ಹೆಡ್ ಕಾನ್ಟೇನಲ್ ವಿಶ್ವನಾಥ್, ಕಳಿಯ ಪಿಡಿಓ ಸಂತೋಷ್ ಪಾಟೀಲ್,ಕಳಿಯ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್.ಪಿ.ಶೆಟ್ಟಿ, ಗ್ರಾಮ ಸಹಾಯಕ ಸ್ಟ್ಯಾನಿ ಡಿಸೋಜ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಕರ್.ಎಮ್, ಸದಸ್ಯ ಕರೀಂ ಗೇರುಕಟ್ಟೆ, ಉಮರ್ ಫಾರೂಕ್ ಕುಟುಂಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya
error: Content is protected !!