July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

ಬೆಳ್ತಂಗಡಿ : ಗೇರುಕಟ್ಟೆ ತೋಟದ ಕೆರೆಯಲ್ಲಿ 22-10-2024 ರಂದು ಅಪರಿಚಿತ ಶವ ಪತ್ತೆಯಾದ ಸಂಬಂಧಿಸಿದಂತೆ ಡಿಎನ್ಎ ಮೂಲಕ ಮೃತನ ಗುರುತು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದು. ಇದೀಗ ಎಸಿ ಹಾಗೂ ಪೊಲೀಸರ ಸಮ್ಮುಖದಲ್ಲಿ ದಫನ ಮಾಡಿದ್ದ ಮೃತದೇಹವನ್ನು ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಸ್ಮಶಾನದಲ್ಲಿ ಪೊಲೀಸರು ಉಮರ್ ಫಾರೂಕ್ ಶವವನ್ನು 23-10-2024 ರಂದು ದಫನ ಮಾಡಿದ್ದ ಉಮರ್ ಫಾರೂಕ್ ಮೃತದೇಹವನ್ನು ಫೆ.4 ರಂದು ಬೆಳಗ್ಗೆ ಪುತ್ತೂರು ಎಸಿ ಶ್ರವಣ್ ಕುಮಾರ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಹಿಟಾಚಿ ಮೂಲಕ ಮಣ್ಣನ್ನು ಅಗೆದು ನಂತರ ಮೃತದೇಹವನ್ನು ಹೊರಗಡೆ ತೆಗೆದು ಮಹಜರು ಮಾಡಿ ನಂತರ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ನಂತರ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ಮೃತದೇಹ ತೆಗೆದುಕೊಂಡು ಹೋಗಿ ಪರಪ್ಪು ಮಸೀದಿಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ದಫನ ಕಾರ್ಯ ನಡೆಸಿದ್ದಾರೆ.

ಪುತ್ತೂರು ಎಸಿ ಶ್ರವಣ್ ಕುಮಾರ್, ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ, ಪ್ರೋಪೆಷನರಿ ಐಪಿಎಸ್ ಮನಿಷಾ ಮನೋಹಿ, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ, ಬೆಳ್ತಂಗಡಿ ಟಿಹೆಚ್ಓ ಸಂಜೀತ್ ಹೆಗ್ಡೆ, ಆರ್.ಐ ಪವಡಪ್ಪ, ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳೀಧರ್ ನಾಯ್ಕ್, ಹೆಡ್ ಕಾನ್ಟೇನಲ್ ವಿಶ್ವನಾಥ್, ಕಳಿಯ ಪಿಡಿಓ ಸಂತೋಷ್ ಪಾಟೀಲ್,ಕಳಿಯ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್.ಪಿ.ಶೆಟ್ಟಿ, ಗ್ರಾಮ ಸಹಾಯಕ ಸ್ಟ್ಯಾನಿ ಡಿಸೋಜ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಕರ್.ಎಮ್, ಸದಸ್ಯ ಕರೀಂ ಗೇರುಕಟ್ಟೆ, ಉಮರ್ ಫಾರೂಕ್ ಕುಟುಂಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya
error: Content is protected !!