23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಫೆ.3 ರಂದು ನಡೆಸಲಾಯಿತು.


ರಾಜ್ಯ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಮಕ್ಕಳನ್ನು ಸಂಸ್ಕೃತ ನಾಗರಿಕರನ್ನಾಗಿಸುವಲ್ಲಿ ಪೋಷಕರ ಪಾತ್ರ ಹಿರಿದಾಗಿದೆ” ಎಂದರು.


“ವಿದ್ಯಾರ್ಥಿಗಳ ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಚಿಂತೆ ಬೇಡ ಚಿಂತನೆ ಅಗತ್ಯ, ನಿರಂತರ ಅಧ್ಯಯನ ಯಶಸ್ಸಿನ ಗುಟ್ಟು ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು.


“ಮಗುವಿನ ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಮನಸ್ಸು ಮುಖ್ಯ. ಏಕಾಗ್ರತೆ ಶ್ರದ್ಧೆ, ನಂಬಿಕೆ ಮತ್ತು ಛಲದಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಾಧ್ಯ” ಎಂದರು.


ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿಯಾದ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿ, ಶಿಕ್ಷಕಿ ದಿವ್ಯ ರವರು ನಿರೂಪಿಸಿ, ವಂದಿಸಿದರು.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
error: Content is protected !!