23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ಸಾಮಾಜಿಕ ಬದ್ಧತೆಯ ಅಂಗವಾಗಿ ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ(ರಿ) ಮತ್ತು ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಮೃದ್ಧಿ ಸಭಾಭವನ ದಲ್ಲಿ ಉಚಿತ ಆರೋಗ್ಯ ಶಿಬಿರವು ಫೆ.8 ನಡೆಯಲಿದೆ.


ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ.


ಬೆಳಿಗ್ಗೆ9.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರಾದ ಡಾ. ಆದಿತ್ಯ ರಾವ್, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆಯಾಗಿರುವ ಡಾ.ಅಂಕಿತಾ ಜಿ,ಭಟ್, ಎಲುಬು ಮತ್ತು ಕೀಲು ತಜ್ಞರಾಗಿರುವ ಡಾ.ರೋಹಿತ್.ಜಿ.ಭಟ್ ಹಾಗೂ ಮಕ್ಕಳ ತಜ್ಞರಾದ ಡಾ.ಗೋವಿಂದ್ ಕಿಶೋರ್ ಅವರ ಸೇವೆ ಲಭ್ಯವಿದೆ.


ವಿಶೇಷವಾಗಿ ಈ ಶಿಬಿರದಲ್ಲಿ ಉಚಿತ ಇ.ಸಿ.ಜಿ, ರಕ್ತದೊತ್ತಡ, ಮಧುಮೇಹ ತಪಾಸಣೆ ಹಾಗೂ ಅಗತ್ಯ ಔಷಧ ವಿತರಣೆ ಇರಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಂತೋನಿ ಫೆರ್ನಾಂಡಿಸ್, ಉಪಾಧ್ಯಕ್ಷ ನರೇಂದ್ರ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ, ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಸಂತೋಷ್ ಕುಮಾರ್ ಜೈನ್, ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ರಮಣ್ಯ ಭಟ್, ಕಾರ್ಯದರ್ಶಿ ಶ್ರೀಮತಿ ಮೇಬಲ್ ಕ್ರಾಸ್ತಾ ಮೊದಲಾದವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Related posts

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya
error: Content is protected !!