22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

ಬೆಳ್ತಂಗಡಿ: ಹಿರಿಯ ತಲೆಮಾರಿನ ಯಕ್ಷಗಾನದ ಅರ್ಥದಾರಿಗಳಲ್ಲಿ ಅಗ್ರಮಾನ್ಯರೆನಿಸಿದ ಕಲಾವಿದ ಅರ್ಥಧಾರಿ ನಿವೃತ್ತ ಶಿಕ್ಷಕ ಕಿವಿ ಗಣಪಯ್ಯ(92 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಅವರು ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳ ಅನೇಕ ಸರಕಾರಿ ಶಾಲೆಗಳಲ್ಲಿ ಹಿಂದಿ ಪಂಡಿತರಾಗಿ, ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ದೇರಾಜೆ, ಶೇಣಿ, ಪೆರ್ಲ, ಸಾಮಗ ಮುಂತಾದ ಹಿರಿಯ ಅರ್ಥದಾರಿಗಳ ಜೊತೆಗೆ ಸರಿಸಾಟಿ ಎನಿಸಿ ಅರ್ಥಗಾರಿಕೆಯಲ್ಲಿ ಮೆರೆದ ಕೆ.ವಿ.ಗಣಪಯ್ಯನವರು ತೀಕ್ಷ್ಣವಾದ ಹರಿತವಾದ ಮಾತಿನ ವೈಖರಿಯಿಂದ ತಾಳಮದ್ದಳೆಗಳಲ್ಲಿ ಬಿಸಿಯೇರಿಸಿ ಅವರು ಪ್ರಸಿದ್ಧರಾಗಿದ್ದರು.

ಭೀಷ್ಮ, ಕೌರವ, ವಾಲಿ, ತಾಮ್ರಧ್ವಜ , ಇಂತಹ ನೂರಾರು ಪಾತ್ರಗಳನ್ನು ಅವರು ವಿಶಿಷ್ಟವಾಗಿ ಚಿತ್ರಿಸುತ್ತಿದ್ದರು. ಪುರಾಣ ಪ್ರವಚನಗಳಲ್ಲಿಯೂ ಅವರು ಪ್ರಸಿದ್ಧರಾಗಿದ್ದರಿಂದ ಅವರ ಮಾತಿನ ಮಾರುಮಾಲೆಯನ್ನು ಎಲ್ಲರೂ ಇಷ್ಟಪಡುತ್ತಿದ್ದರು. ಅನೇಕ ಯಕ್ಷಗಾನ ಸಂಘ ಸಂಸ್ಥೆಗಳಿಗೆ, ಅರ್ಥಧಾರಿಗಳಿಗೆ ಮಾರ್ಗದರ್ಶಿಯಾಗಿದ್ದರು. ಪುತ್ತೂರಿನ ಯಕ್ಷ ಆಂಜನೇಯ ಪ್ರಶಸ್ತಿ, ಉಡುಪಿಯ ಯಕ್ಷ ಕಲಾ ರಂಗ ಹಾಗೂ ದೇವಾನಂದ ಭಟ್ಟರ ಯಕ್ಷಕಲಾ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

ವಿವಿಧ ಶಾಲೆಗಳ ಅಭಿವೃದ್ಧಿ ಹಾಗೂ ಊರಿನ ಹಲವು ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿಯೂ ಅವರು ಪ್ರವೃತ್ತರಾಗಿ ಮುನ್ನಡೆಸಿದ್ದರು. ಕಾಣಿಯೂರು ನಿಂತಿಕಲ್ಲು ಬಳಿಯ ಆಲಾಜೆ ಎಂಬಲ್ಲಿ ಕೃಷಿಕರಾಗಿ ಅವರು ತಮ್ಮ ನಿವೃತ್ತ ಜೀವನವನ್ನು ನಡೆಸುತ್ತಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!