25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

ಬೆಳ್ತಂಗಡಿ: ತುಳುನಾಡಿನಾದ್ಯಂತ ಹೆಸರುವಾಸಿಯಾದ ‘ರಾಜ್ ಸೌಂಡ್ಸ್ &ಲೈಟ್ಸ್’ ತುಳು ಸಿನಿಮಾ ತಂಡದ ಮತ್ತೊಂದು ಸಿನಿಮಾ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ಜ.31 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನದೊಂದಿಗೆ ಮುನ್ನಡೆಯುತ್ತಿದ್ದು ಈ ಚಿತ್ರತಂಡವು ಫೆ.4ರಂದು ಗುರುವಾಯನಕೆರೆಯಿಂದ ಮೆರವಣಿಗೆಯ ಮೂಲಕ ಬೆಳ್ತಂಗಡಿ ಸರ್ಕಲ್ ಗೆ ಬಂದು ಬಳಿಕ ಭಾರತ್ ಟಾಕೀಸ್ ಗೆ ಭೇಟಿ ನೀಡಿದರು.

ಕಾಮಿಡಿ ಕಿಲಾಡಿ ಖ್ಯಾತಿಯ, ದಸ್ಕತ್ ತುಳು ಸಿನಿಮಾದ ನಿರ್ದೇಶಕ ಅನೀಶ್ ವೇಣೂರು ಮಾತನಾಡಿ, ರಾಜ್ ಸೌಂಡ್ಸ್ & ಲೈಟ್ಸ್ ಸಿನಿಮಾದ ಮೂಲಕ ತುಳುನಾಡಿನ ಪ್ರೇಕ್ಷಕರ ಮನಸ್ಸನ್ನು ಗೆದ್ದು ಪ್ರತಿಯೊಂದು ಪ್ರೇಕ್ಷಕನಿಗೂ ಮನೋರಂಜನೆ ನೀಡಬೇಕು ಎಂಬ ಉದ್ದೇಶದಿಂದ ಚಿತ್ರ ತಂಡವು ಇಂದು ಮತ್ತೊಂದು ಅದ್ಭುತವಾದ ಸಿನಿಮಾವನ್ನು ಮಾಡಿ ಧೈರ್ಯದಿಂದ ಮುಂದೆ ಬಂದಿದ್ದಾರೆ. ನಾನು ಸಿನಿಮಾವನ್ನು ನೋಡಿದ್ದೇನೆ ಬಹಳ ಖುಷಿ ಕೊಟ್ಟಿದೆ. ಮಿಡ್ಲ್ ಕ್ಲಾಸ್ ಸಿನಿಮಾವನ್ನು ಹೈ ಕ್ಲಾಸ್ ನಲ್ಲಿ ಗೆಲ್ಲಿಸಬೇಕು ಎಂದು ವಿನಂತಿಸಿಕೊಂಡರು.

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಖ್ಯಾತಿಯ ಸುರಕ್ಷಾ ಆಚಾರ್ಯ ಕನ್ನಾಜೆ ಯವರು ಬಿಡಿಸಿರುವ ಸಿನಿಮಾದ ನಾಯಕಿ ನಟಿ ಸಮತಾ ಅಮೀನ್ ರವರ ಆರ್ಟ್ ವರ್ಕ್ ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾದ ನಿರ್ಮಾಪಕ ಆನಂದ್ ಎನ್. ಕುಂಪಲ, ಸಹ ನಿರ್ಮಾಪಕರಾದ ಭರತ್ ಗಟ್ಟಿ, ಅಶ್ವಿನಿ ರಕ್ಷಿತ್, ನಿರ್ದೇಶಕರಾದ ರಾಹುಲ್ ಅಮೀನ್, ಚಿತ್ರದ ನಾಯಕ ನಟ ವಿನೀತ್ ಕುಮಾರ್, ನಾಯಕಿ ಸಮತ ಅಮೀನ್, ಬೆಳ್ತಂಗಡಿ ಭಾರತ್ ಟಾಕೀಸ್ ನ ಮ್ಯಾನೇಜರ್ ಶೋಭಿತ್, ಚಿತ್ರದಲ್ಲಿ ಅಭಿನಯಿಸಿರುವ ಬೆಳ್ತಂಗಡಿಯ ಬಾಲ ನಟ ರಿಷಬ್ ರಾವ್, ಚಿತ್ರತಂಡ ಹಾಗೂ ಪ್ರೇಕ್ಷಕರು ಉಪಸ್ಥಿತರಿದ್ದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!