July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

ಬೆಳ್ತಂಗಡಿ: ಮೊಗ್ರು ಗ್ರಾಮ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರು ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದನ್ನು ಮನಗಂಡು ಶಾಲೆಯನ್ನು ಉನ್ನತೀಕರಿಸಿ, ಆಧುನಿಕ ಸೌಲಭ್ಯವನ್ನು ಒದಗಿಸುವ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್‌ನ್ನು ಸ್ಥಾಪನೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇಲ್ಲಿಗೆ ಶಾಲೆಯನ್ನು ಅಭಿವೃದ್ದಿ ಮಾಡುವ ಪ್ರಸ್ತಾವ ಸಲ್ಲಿಸಲಾಯಿತು. ಟ್ರಸ್ಟ್‌ನ ಮನವಿಯನ್ನು ಪುರಸ್ಕರಿಸಿ ಶಾಲಾ ದತ್ತು ಸ್ವೀಕಾರ ಅಧಿನಿಯಮದಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ ಹಾಗೂ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಬೆಳ್ತಂಗಡಿ ನಡುವೆ ಜ.18 ರಂದು ಕರಾರು ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ಕರಾರು ಒಪ್ಪಂದದಂತೆ ಮು.ಸ.ಸಾ.ಸೇ ಟ್ರಸ್ಟ್ 2025-2026 ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ವಿದ್ಯಾರ್ಥಿಗಳ ಪ್ರವೇಶ ಪ್ರೋತ್ಸಾಹಿಸುವುದರೊಂದಿಗೆ ಸರಕಾರದಿಂದ ಶಿಕ್ಷಣಕ್ಕೆ ಸಿಗುವ ಉಚಿತ ಸೌಲಭ್ಯವನ್ನು ಮಾಹಿತಿ ನೀಡುವುದರೊಂದಿಗೆ ಟ್ರಸ್ಟ್‌ನ ಪ್ರಾಯೋಜಕತ್ವದಲ್ಲಿ 2 ಆಂಗ್ಲ ಮಾಧ್ಯಮ ಭೋದನೆಗೆ 2 ಶಿಕ್ಷಕ/ಕಿಯರನ್ನು ನೇಮಿಸುವ ಆಧುನಿಕ ತಂತ್ರಜ್ಙಾನದ ಡಿಜಿಟಲ್ ಶಿಕ್ಷಣ ಸಾಮಾಗ್ರಿ ಒದಗಿಸುವುದು.

ಶಾಲಾ ವಾತಾವರಣದಲ್ಲಿ ಆಟದ ಸಾಮಾಗ್ರಿ ಒದಗಿಸುವುದು, ಶಾಲೆಗೆ ಬೇಕಾದ ಪಿಠೋಪಕರಣ ಹಾಗೂ ಶೈಕ್ಷಣಿಕ ಸಾಮಾಗ್ರಿ ಒದಗಿಸುವುದು, ಶಾಲಾ ಪರಿಸರದಲ್ಲಿ ತರಕಾರಿ ತೋಟ ಮಾಡುವುದುದರೊಂದಿಗೆ, ಶಾಲಾ ಮಕ್ಕಳ ಪ್ರಯಾಣಕ್ಕೆ ಅನುಕೂಲವಾಗುವಂತೆ ವಾಹಾನ ವ್ಯವಸ್ಥೆಯನ್ನು ಒದಗಿಸುವುದರೊಂದಿಗೆ, ಯೋಗ, ಕ್ರೀಡೆ, ಸಾಂಸ್ಕೃತಿಕ ತರಭೇತಿ ಇನ್ನೀತರ ಸೌಲಭ್ಯದೊಂದಿಗೆ ಟ್ರಸ್ಟ್ ಸ,ಕಿ,ಪ್ರಾ.ಶಾಲೆ ಮೊಗ್ರು ಇದರ ಸರ್ವಾಂಗಿನ ಅಭಿವೃದ್ದಿಗೆ ಕಾರ್ಯ ನಿರ್ವಹಿಸಬಹುದು ಎಂದು ಒಪ್ಪಂದ ಕರಾರಿನಲ್ಲಿ ಉಲ್ಲೇಖಿಸಲಾಯಿತ್ತು.

ಕರಾರು ಒಪ್ಪಂದ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೆಳ್ತಂಗಡಿ ಇದರ ಬಿ.ಇ.ಒ ಶ್ರೀಮತಿ ತಾರಾಕೇಸರಿ ಕಛೇರಿ ವ್ಯವಸ್ಥಾಪಕ ನರೇಶ್ ನಾಯ್ಕ ಮು.ಸ.ಶಾ.ಸೇ.ಟ್ರಸ್ಟ್‌ನ ಅಧ್ಯಕ್ಷ ಕುಶಾಲಪ್ಪ ಗೌಡ ನೆಕ್ಕಾರಜೆ, ಜೊತೆ ಕಾರ್ಯದರ್ಶಿ ಉಮೇಶ ಗೌಡ ಪರಕ್ಕಜೆ ಉಪಸ್ಥಿತರಿದ್ದರು.

Related posts

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya
error: Content is protected !!