September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ಅಭ್ಯಾಸ ಅಕಾಡೆಮಿಯಲ್ಲಿ ಬೆಳ್ತಂಗಡಿ ತಾಲೂಕಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ತರಬೇತಿ ಕಾರ್ಯಾಗಾರವು ಫೆ. 2 ರಂದು ನಡೆಯಿತು.

ಕಾರ್ಯಾಗಾರವನ್ನು ಸುದ್ದಿ ಉದಯ ಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಮುಂದಿನ ಓದಿನ ಕುರಿತು ಜಾಗ್ರತರಾಗಿರಬೇಕು. ಬದ್ದತೆ ಮತ್ತು ಇಚ್ಛಾಶಕ್ತಿಯಿದ್ದಾಗ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೊಬೋ ವಹಿಸಿ ಮಾತನಾಡಿ ಒಬ್ಬ ಮಾದರಿ ವ್ಯಕ್ತಿಯಾಗಿ ಬೆಳೆಯಲೂ ಒಳ್ಳೆ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಭವಿಷ್ಯವನ್ನು ಕಟ್ಟಬೇಕು.ಈ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಫಲಪ್ರದವಾಗುತ್ತದೆ ಎಂದರು.

ವೇದಿಕೆಯಲ್ಲಿ ಪೈ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರ, ಎಸ್.ಡಿ.ಎಮ್.ಸ್ನಾತಕೋತ್ತರ ಕಾಲೇಜಿನ ನಿವೃತ್ತ ಡೀನ್ ಗಣಪಯ್ಯ ಭಟ್,ಅಭ್ಯಾಸ್ ಸಂಸ್ಥೆಯ ಆಡಳಿತಧಿಕಾರಿ ಪ್ರಮೋದ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ವಾರ್ಡನ್ ಶ್ರೀಮತಿ ಹೇಮಲತಾ ಎಂ.ಉಪಸ್ಥಿತರಿದ್ದರು.

ಅಬ್ಯಾಸ್ ಅಕಾಡೆಮಿಯ ಅಧ್ಯಕ್ಷರಾದ ಕಾರ್ತಿಕೇಯ ಭಟ್ ಸಂಸ್ಥೆಯ ಬಗ್ಗೆ ಮಾತನಾಡಿ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


120 ವಿದ್ಯಾರ್ಥಿಗಳು ಭಾಗವಹಿಸುವಿಕೆ: ಎಸ್‌.ಎಸ್.ಎಲ್‌.ಸಿ ವಿದ್ಯಾರ್ಥಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿ ತರಭೇತಿಯ ಸದುಪಯೋಗವನ್ನು ಪಡೆದರು.ಪರಿಣಿತ ತರಬೇತುದಾರರಾದ ಶ್ರೀಮತಿ ಚೈತ್ರ, ಶ್ರೀಮತಿ ಸುಮಲತ ಹಾಗೂ ಕಾರ್ತಿಕೇಯ ಭಟ್ ತರಬೇತಿ ನೀಡಿದರು.

Related posts

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya
error: Content is protected !!