25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ ಪ್ರಾರಂಭಗೊಂಡು ಫೆ. 7 ರ ವರೆಗೆ ಜಾತ್ರಾಮಹೋತ್ಸವವು ನಡೆಯಲಿದ್ದು ತಂತ್ರಿಗಳಾದ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ಫೆ 4 ರಂದು ದೇವರಿಗೆ ಪಂಚಾಮೃತ ಅಭಿಷೇಕ, ಸತರುದ್ರಾಭಿಷೇಕ, ನಿತ್ಯ ಬಲಿ ಉತ್ಸವ, ಮಹಾಪೂಜೆ, ಭದ್ರಕಾಳಿ ಭಜನಾ ಮಂಡಳಿ ಬೆಂಜನ ಪದವು ಹಾಗೂ ಸಾಮಗನ ಭಜನಾಮೃತ ಮಂಗಳೂರು ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಫೆ 5 ರಂದು ರುದ್ರ ಹೋಮ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು.

ಸಾಯಂಕಾಲ ದರ್ಶನ ಬಲಿ ಉತ್ಸವ ಬಟ್ಟಲು ಕಾಣಿಕೆ ದೈವ, ದೇವರ ಭೇಟಿ ನವಶಕ್ತಿ ಭಜನಾ ಮಂಡಳಿ ಬೊಳ್ಪಗುಡ್ಡೆ ಕಾವೂರು ಮತ್ತು ರಾಮಾಂಜನೇಯ ಭಜನಾ ಮಂಡಳಿ ಕಾರ್ಲ ಪೇರ್ನೆ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!