ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ ಪ್ರಾರಂಭಗೊಂಡು ಫೆ. 7 ರ ವರೆಗೆ ಜಾತ್ರಾಮಹೋತ್ಸವವು ನಡೆಯಲಿದ್ದು ತಂತ್ರಿಗಳಾದ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ಫೆ 4 ರಂದು ದೇವರಿಗೆ ಪಂಚಾಮೃತ ಅಭಿಷೇಕ, ಸತರುದ್ರಾಭಿಷೇಕ, ನಿತ್ಯ ಬಲಿ ಉತ್ಸವ, ಮಹಾಪೂಜೆ, ಭದ್ರಕಾಳಿ ಭಜನಾ ಮಂಡಳಿ ಬೆಂಜನ ಪದವು ಹಾಗೂ ಸಾಮಗನ ಭಜನಾಮೃತ ಮಂಗಳೂರು ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಫೆ 5 ರಂದು ರುದ್ರ ಹೋಮ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು.

ಸಾಯಂಕಾಲ ದರ್ಶನ ಬಲಿ ಉತ್ಸವ ಬಟ್ಟಲು ಕಾಣಿಕೆ ದೈವ, ದೇವರ ಭೇಟಿ ನವಶಕ್ತಿ ಭಜನಾ ಮಂಡಳಿ ಬೊಳ್ಪಗುಡ್ಡೆ ಕಾವೂರು ಮತ್ತು ರಾಮಾಂಜನೇಯ ಭಜನಾ ಮಂಡಳಿ ಕಾರ್ಲ ಪೇರ್ನೆ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ

Related posts

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya
error: Content is protected !!