July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya
error: Content is protected !!