September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya
error: Content is protected !!