September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ಅಭ್ಯಾಸ ಅಕಾಡೆಮಿಯಲ್ಲಿ ಬೆಳ್ತಂಗಡಿ ತಾಲೂಕಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ತರಬೇತಿ ಕಾರ್ಯಾಗಾರವು ಫೆ. 2 ರಂದು ನಡೆಯಿತು.

ಕಾರ್ಯಾಗಾರವನ್ನು ಸುದ್ದಿ ಉದಯ ಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಮುಂದಿನ ಓದಿನ ಕುರಿತು ಜಾಗ್ರತರಾಗಿರಬೇಕು. ಬದ್ದತೆ ಮತ್ತು ಇಚ್ಛಾಶಕ್ತಿಯಿದ್ದಾಗ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೊಬೋ ವಹಿಸಿ ಮಾತನಾಡಿ ಒಬ್ಬ ಮಾದರಿ ವ್ಯಕ್ತಿಯಾಗಿ ಬೆಳೆಯಲೂ ಒಳ್ಳೆ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಭವಿಷ್ಯವನ್ನು ಕಟ್ಟಬೇಕು.ಈ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಫಲಪ್ರದವಾಗುತ್ತದೆ ಎಂದರು.

ವೇದಿಕೆಯಲ್ಲಿ ಪೈ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರ, ಎಸ್.ಡಿ.ಎಮ್.ಸ್ನಾತಕೋತ್ತರ ಕಾಲೇಜಿನ ನಿವೃತ್ತ ಡೀನ್ ಗಣಪಯ್ಯ ಭಟ್,ಅಭ್ಯಾಸ್ ಸಂಸ್ಥೆಯ ಆಡಳಿತಧಿಕಾರಿ ಪ್ರಮೋದ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ವಾರ್ಡನ್ ಶ್ರೀಮತಿ ಹೇಮಲತಾ ಎಂ.ಉಪಸ್ಥಿತರಿದ್ದರು.

ಅಬ್ಯಾಸ್ ಅಕಾಡೆಮಿಯ ಅಧ್ಯಕ್ಷರಾದ ಕಾರ್ತಿಕೇಯ ಭಟ್ ಸಂಸ್ಥೆಯ ಬಗ್ಗೆ ಮಾತನಾಡಿ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


120 ವಿದ್ಯಾರ್ಥಿಗಳು ಭಾಗವಹಿಸುವಿಕೆ: ಎಸ್‌.ಎಸ್.ಎಲ್‌.ಸಿ ವಿದ್ಯಾರ್ಥಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿ ತರಭೇತಿಯ ಸದುಪಯೋಗವನ್ನು ಪಡೆದರು.ಪರಿಣಿತ ತರಬೇತುದಾರರಾದ ಶ್ರೀಮತಿ ಚೈತ್ರ, ಶ್ರೀಮತಿ ಸುಮಲತ ಹಾಗೂ ಕಾರ್ತಿಕೇಯ ಭಟ್ ತರಬೇತಿ ನೀಡಿದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
error: Content is protected !!