July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

ಬೆಳ್ತಂಗಡಿ : ಕಳಿಯ ಪಂಚಾಯತ್ ಗ್ರಾಮದ 15 ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಫೆ.5 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಗೇರುಕಟ್ಟೆ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜೀತ್ ಕುಮಾರ್ ಸಭೆಯನ್ನು ನಡೆಸಿಕೊಟ್ಟರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ್ಞ ಕೆ, ತಾಲೂಕು ಕಿರಿಯ ಅಭಿಯಂತರ ಗಫೂರು, ನರೇಗ ತಾಂತ್ರಿಕ ಸಹಾಯಕ ಅಭಿಯಂತರ ಶರಣ್ ಕುಮಾರ್ ರೈ, ಬೆಳ್ತಂಗಡಿ ತೋಟಗಾರಿಕೆ ಸಹಾಯಕ ಅಧಿಕಾರಿ ಮಲ್ಲಿನಾಥ ಬಿರದಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಬಗ್ಗೆ ತಾಲೂಕು ಸಾಮಾಜಿಕ ಪರಿಶೋಧನೆಯ ವ್ಯವಸ್ಥಾಪಕ
ರಾಜೀವ್ ಸಾಲ್ಯಾನ್ ಸಭೆಯಲ್ಲಿ ಮಾಹಿತಿಗಳನ್ನು ನೀಡಿದರು.
ಪಂಚಾಯತ್ ಕಾಮಗಾರಿ ಬಗ್ಗೆ ಲೆಕ್ಕಪರಿಶೋಧಕರಾದ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಾವಣ್ಯ ಸಭೆಯಲ್ಲಿ ವರದಿ ಮಂಡಿಸಿದರು. 2023-24ನೇ ಸಾಲಿನಲ್ಲಿ ಕಳಿಯ ಗ್ರಾಮ ಪಂಚಾಯತ್ ಗೇರುಕಟ್ಟೆ-ನೆಲ್ಲಿಕಟ್ಟೆ ರಸ್ತೆ ಬದಿ ನೆಡುತೋಪು ನಿರ್ಮಾಣ ಹಾಗೂ ನೆಲ್ಲಿಕಟ್ಚೆ- ಮಲ್ಲೊಟ್ಟು ತಿಳಿಸಿದ ಪರಿಸರದಲ್ಲಿ ನೆಡುತೋಪು ಕಾಮಗಾರಿ ದುರುಪಯೋಗವಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಜಂಟಿ ಸಮಿತಿ ನೇಮಕ ಮಾಡಿ ಸೂಕ್ತ ತನಿಖೆ ಮಾಡಬೇಕು ಎಂದು ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಂ, ಸುಭಾಷಿಣಿ ಕೆ, ಸ್ಥಳೀಯ ಬಾಲಕೃಷ್ಣ ಗೌಡ, ಕೇಶವ ಪೂಜಾರಿ ಒತ್ತಾಯಿಸಿದರು. ಗೇರುಕಟ್ಟೆ ಸಮೀಪದ ಪರಪ್ಪು ಎಂಬಲ್ಲಿ ಮೀನು ಮಾರುಕಟ್ಟೆ ರಚನೆ ಮಾಡಲು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸುಮಾರು ರೂ. 5 ಲಕ್ಷ ಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ಸರಿಯಾದ ರೀತಿಯಲ್ಲಿ ಸಾರ್ವಜನಿಕರಿಗೆ ಪ್ರಯೋಜನವಿಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಅಧ್ಯಕ್ಷ ಕೇಶವ ಪೂಜಾರಿ ಸಭೆಯಲ್ಲಿ ಒತ್ತಾಯಿಸಿದರು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ಮಶಾನದ ಹತ್ತಿರದಲ್ಲಿ ಅಂದಾಜು ರೂ. 2ಲಕ್ಷ ಅನುದಾನದಲ್ಲಿ ಕೊಳವೆ ಬಾವಿಯ ಕೊರೆಯಲಾಗಿದೆ. ನೀರಿನ ಮಟ್ಟ ಕಡಿಮೆ ಇರುವುದರಿಂದ ಪಂಪು ಅಳವಡಿಸದೇ ಅನುದಾನ ನಿರುಪಯುಕ್ತವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.


ಲೆಕ್ಕಪತ್ರ ಮಂಡಿಸಿದ ರಾಜೀವ್ ಸಾಲಿಯಾನ್, ಪಂಚಾಯತು ಸದಸ್ಯರಾದ ಸುಧಾಕರ ಮಜಲು., ಶ್ರೀಮತಿ ಸುಭಾಷಿಣಿ ಕೆ., ಅಬ್ದುಲ್ ಕರೀಂ ಕೆ.ಎಂ.ಶ್ರೀಮತಿ ಕುಸುಮ.ಎನ್. ಬಂಗೇರ, ಯಶೋಧರ ಶೆಟ್ಟಿ ಕೆ., ವಿಜಯ ಕುಮಾರ್ ಕೆ, ಲತೀಫ್,
ಮೋಹಿನಿ ಹೆಚ್, ಮರೀಟಾ ಪಿಂಟೊ, ಪುಷ್ಪ,ಶ್ವೇತಾ ಶ್ರೀನಿವಾಸ್ ಉಪಸ್ಥಿತರಿದ್ದರು.


ಗೇರುಕಟ್ಟೆ ಹಾಲು ಉ.ಸಂ.ಅಧ್ಯಕ್ಷ ಜನಾರ್ದನ ಗೌಡ ಕೆ, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ , ಮಾಜಿ ಉಪಾಧ್ಯಕ್ಷ ಸತೀಶ್ ನಾಯ್ಕ್, ಕಳಿಯ ಸಿ.ಎ. ಬ್ಯಾಂಕು ನಿರ್ದೇಶಕರು, ಹಾಲು ಉತ್ಪಾದಕರ ಸಂಘದ ನಿರ್ದೇಶಕರು , ಸರಕಾರಿ ಶಾಲಾ ಶಿಕ್ಷಕರು, ಸಾಮಾಜಿಕ ಪರಿಶೋಧನೆ ಸಂಪನ್ಮೂಲ ವ್ಯಕ್ತಿಗಳಾದ ಸುಮಲತಾ, ಸುಚೇತನಾ, ಹರೀಣಿ, ಉಷಾ, ಈಶ್ವರಿ, ದೀಪ್ತಿ ಎಸ್, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

Related posts

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!