July 23, 2026
ತಾಲೂಕು ಸುದ್ದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಬಿಜೆಪಿ ಸಹಕಾರ ಭಾರತೀಯ ಕಾರ್ಯಕರ್ತ ಬಂಧುಗಳಿಗೆ, ಅಮೂಲ್ಯ ಮತ ನೀಡಿ ಆಶೀರ್ವದಿಸಿದ ಮತದಾರರಿಗೆ, ವಿಜಯಪತಾಕೆ ಹಾರಿಸಿದ ಸ್ಪರ್ಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಫೆ. 5ರಂದು ಜರಗಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕೊಕ್ಕಡ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ ಪೂವಾಜೆ, ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳನ್ನು ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಹೂ ನೀಡುವುದರ ಮೂಲಕ ಪಕ್ಷದ ವತಿಯಿಂದ ಅಭಿನಂದಿಸಲಾಯಿತು. ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮನೋಜ್ ಸ್ವಾಗತಿಸಿದರು. ಕೊಕ್ಕಡ ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮ ನಿರೂಪಿಸಿದರು. ಗ್ರಾ. ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್ ವಂದಿಸಿದರು.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya
error: Content is protected !!