July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ,ಪಜಿರಡ್ಕದಲ್ಲಿ ಮಂಗಳವಾರ ರಾತ್ರಿ ಜಾತ್ರೋತ್ಸವದ ಅಂಗವಾಗಿ ಪುಷ್ಪರಥೋತ್ಸವ ಜರಗಿತು.


ದಾನಿಗಳು ನೀಡಿದ ನೂತನ ಪುಷ್ಪರಥ ಸಮರ್ಪಣೆ ನಡೆದು 102 ವರ್ಷಗಳ ಬಳಿಕ ದೇವಸ್ಥಾನದಲ್ಲಿ ಜಾತ್ರೆಯ ಸಮಯ ರಥೋತ್ಸವ ಜರಗಿತು.
ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ರಾಜೇಶ್ ಹೊಳ್ಳ ಸಹಕಾರದಲ್ಲಿ ವೇದಮೂರ್ತಿ ವೆಂಕಟರಾಜ ಹೆಬ್ಬಾರ್ ದೇವರ ಬಲಿ, ಉತ್ಸವ, ಪಾಲಕ್ಕಿ ಬಲಿ, ಕಟ್ಟೆ ಪೂಜೆ, ವಸಂತ ಕಟ್ಟೆ ಪೂಜೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.
15 ಕಿಂತ ಅಧಿಕ ಭಜನಾ ತಂಡಗಳಿಂದ ದೇವಸ್ಥಾನದ ಹೊರಾಂಗಣದಲ್ಲಿ ಭಜನೆ ಕಾರ್ಯಕ್ರಮ ,ಅಷ್ಟ ಸೇವೆ ಜರಗಿತು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದೇವದಾಸ್ ಕಾಪಿಕಾಡ್ ತಂಡದವರಿಂದ ತುಳು ನಾಟಕ ಪ್ರದರ್ಶನಗೊಂಡಿತು.


-ಅಭಿನಂದನೆ ಕಾರ್ಯಕ್ರಮ-
ಸುಮಾರು 8:50 ಲಕ್ಷ ರೂ. ವೆಚ್ಚದ ನೂತನ ಪುಷ್ಪರಥವನ್ನು ದೇವಸ್ಥಾನಕ್ಕೆ ನೀಡಿದ ದಾನಿಗಳಾದ ಸುಕನ್ಯಾ ಮತ್ತು ಜಯರಾಮ್ ರಾವ್ ಹಾಗೂ ಮಕ್ಕಳನ್ನು ಶೋಭಾ ಯಾತ್ರೆ, ಜಾತ್ರೆಯ ಕಾರ್ಯಕ್ರಮಗಳಿಗೆ ಸಹಕರಿಸಿದವರನ್ನು ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.
ಆಡಳಿತಾಧಿಕಾರಿ ನಾಗಶಯನ ರಾವ್ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್, ತುಕಾರಾಂ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್, ನ್ಯಾಯವಾದಿ ಗಣೇಶ ಗೌಡ ,ಬಾಲಚಂದ್ರ ರಾವ್, ವೆಂಕಟರಮಣ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ರವಿಕುಮಾರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!