25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
error: Content is protected !!