30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya
error: Content is protected !!