23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya
error: Content is protected !!