23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya
error: Content is protected !!