22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!