32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ಅಭ್ಯಾಸ ಅಕಾಡೆಮಿಯಲ್ಲಿ ಬೆಳ್ತಂಗಡಿ ತಾಲೂಕಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ತರಬೇತಿ ಕಾರ್ಯಾಗಾರವು ಫೆ. 2 ರಂದು ನಡೆಯಿತು.

ಕಾರ್ಯಾಗಾರವನ್ನು ಸುದ್ದಿ ಉದಯ ಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಮುಂದಿನ ಓದಿನ ಕುರಿತು ಜಾಗ್ರತರಾಗಿರಬೇಕು. ಬದ್ದತೆ ಮತ್ತು ಇಚ್ಛಾಶಕ್ತಿಯಿದ್ದಾಗ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೊಬೋ ವಹಿಸಿ ಮಾತನಾಡಿ ಒಬ್ಬ ಮಾದರಿ ವ್ಯಕ್ತಿಯಾಗಿ ಬೆಳೆಯಲೂ ಒಳ್ಳೆ ಗುರಿ, ವಿದ್ಯೆ ಹಾಗೂ ಬುದ್ದಿ ಅಗತ್ಯ. ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಭವಿಷ್ಯವನ್ನು ಕಟ್ಟಬೇಕು.ಈ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಫಲಪ್ರದವಾಗುತ್ತದೆ ಎಂದರು.

ವೇದಿಕೆಯಲ್ಲಿ ಪೈ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರ, ಎಸ್.ಡಿ.ಎಮ್.ಸ್ನಾತಕೋತ್ತರ ಕಾಲೇಜಿನ ನಿವೃತ್ತ ಡೀನ್ ಗಣಪಯ್ಯ ಭಟ್,ಅಭ್ಯಾಸ್ ಸಂಸ್ಥೆಯ ಆಡಳಿತಧಿಕಾರಿ ಪ್ರಮೋದ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ವಾರ್ಡನ್ ಶ್ರೀಮತಿ ಹೇಮಲತಾ ಎಂ.ಉಪಸ್ಥಿತರಿದ್ದರು.

ಅಬ್ಯಾಸ್ ಅಕಾಡೆಮಿಯ ಅಧ್ಯಕ್ಷರಾದ ಕಾರ್ತಿಕೇಯ ಭಟ್ ಸಂಸ್ಥೆಯ ಬಗ್ಗೆ ಮಾತನಾಡಿ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


120 ವಿದ್ಯಾರ್ಥಿಗಳು ಭಾಗವಹಿಸುವಿಕೆ: ಎಸ್‌.ಎಸ್.ಎಲ್‌.ಸಿ ವಿದ್ಯಾರ್ಥಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿ ತರಭೇತಿಯ ಸದುಪಯೋಗವನ್ನು ಪಡೆದರು.ಪರಿಣಿತ ತರಬೇತುದಾರರಾದ ಶ್ರೀಮತಿ ಚೈತ್ರ, ಶ್ರೀಮತಿ ಸುಮಲತ ಹಾಗೂ ಕಾರ್ತಿಕೇಯ ಭಟ್ ತರಬೇತಿ ನೀಡಿದರು.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!