24.8 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಬಿಜೆಪಿ ಸಹಕಾರ ಭಾರತೀಯ ಕಾರ್ಯಕರ್ತ ಬಂಧುಗಳಿಗೆ, ಅಮೂಲ್ಯ ಮತ ನೀಡಿ ಆಶೀರ್ವದಿಸಿದ ಮತದಾರರಿಗೆ, ವಿಜಯಪತಾಕೆ ಹಾರಿಸಿದ ಸ್ಪರ್ಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಫೆ. 5ರಂದು ಜರಗಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕೊಕ್ಕಡ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ ಪೂವಾಜೆ, ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳನ್ನು ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಹೂ ನೀಡುವುದರ ಮೂಲಕ ಪಕ್ಷದ ವತಿಯಿಂದ ಅಭಿನಂದಿಸಲಾಯಿತು. ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮನೋಜ್ ಸ್ವಾಗತಿಸಿದರು. ಕೊಕ್ಕಡ ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮ ನಿರೂಪಿಸಿದರು. ಗ್ರಾ. ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್ ವಂದಿಸಿದರು.

Related posts

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!