July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ,ಪಜಿರಡ್ಕದಲ್ಲಿ ಮಂಗಳವಾರ ರಾತ್ರಿ ಜಾತ್ರೋತ್ಸವದ ಅಂಗವಾಗಿ ಪುಷ್ಪರಥೋತ್ಸವ ಜರಗಿತು.


ದಾನಿಗಳು ನೀಡಿದ ನೂತನ ಪುಷ್ಪರಥ ಸಮರ್ಪಣೆ ನಡೆದು 102 ವರ್ಷಗಳ ಬಳಿಕ ದೇವಸ್ಥಾನದಲ್ಲಿ ಜಾತ್ರೆಯ ಸಮಯ ರಥೋತ್ಸವ ಜರಗಿತು.
ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ರಾಜೇಶ್ ಹೊಳ್ಳ ಸಹಕಾರದಲ್ಲಿ ವೇದಮೂರ್ತಿ ವೆಂಕಟರಾಜ ಹೆಬ್ಬಾರ್ ದೇವರ ಬಲಿ, ಉತ್ಸವ, ಪಾಲಕ್ಕಿ ಬಲಿ, ಕಟ್ಟೆ ಪೂಜೆ, ವಸಂತ ಕಟ್ಟೆ ಪೂಜೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.
15 ಕಿಂತ ಅಧಿಕ ಭಜನಾ ತಂಡಗಳಿಂದ ದೇವಸ್ಥಾನದ ಹೊರಾಂಗಣದಲ್ಲಿ ಭಜನೆ ಕಾರ್ಯಕ್ರಮ ,ಅಷ್ಟ ಸೇವೆ ಜರಗಿತು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದೇವದಾಸ್ ಕಾಪಿಕಾಡ್ ತಂಡದವರಿಂದ ತುಳು ನಾಟಕ ಪ್ರದರ್ಶನಗೊಂಡಿತು.


-ಅಭಿನಂದನೆ ಕಾರ್ಯಕ್ರಮ-
ಸುಮಾರು 8:50 ಲಕ್ಷ ರೂ. ವೆಚ್ಚದ ನೂತನ ಪುಷ್ಪರಥವನ್ನು ದೇವಸ್ಥಾನಕ್ಕೆ ನೀಡಿದ ದಾನಿಗಳಾದ ಸುಕನ್ಯಾ ಮತ್ತು ಜಯರಾಮ್ ರಾವ್ ಹಾಗೂ ಮಕ್ಕಳನ್ನು ಶೋಭಾ ಯಾತ್ರೆ, ಜಾತ್ರೆಯ ಕಾರ್ಯಕ್ರಮಗಳಿಗೆ ಸಹಕರಿಸಿದವರನ್ನು ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.
ಆಡಳಿತಾಧಿಕಾರಿ ನಾಗಶಯನ ರಾವ್ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್, ತುಕಾರಾಂ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್, ನ್ಯಾಯವಾದಿ ಗಣೇಶ ಗೌಡ ,ಬಾಲಚಂದ್ರ ರಾವ್, ವೆಂಕಟರಮಣ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ರವಿಕುಮಾರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya
error: Content is protected !!