23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ,ಪಜಿರಡ್ಕದಲ್ಲಿ ಮಂಗಳವಾರ ರಾತ್ರಿ ಜಾತ್ರೋತ್ಸವದ ಅಂಗವಾಗಿ ಪುಷ್ಪರಥೋತ್ಸವ ಜರಗಿತು.


ದಾನಿಗಳು ನೀಡಿದ ನೂತನ ಪುಷ್ಪರಥ ಸಮರ್ಪಣೆ ನಡೆದು 102 ವರ್ಷಗಳ ಬಳಿಕ ದೇವಸ್ಥಾನದಲ್ಲಿ ಜಾತ್ರೆಯ ಸಮಯ ರಥೋತ್ಸವ ಜರಗಿತು.
ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ರಾಜೇಶ್ ಹೊಳ್ಳ ಸಹಕಾರದಲ್ಲಿ ವೇದಮೂರ್ತಿ ವೆಂಕಟರಾಜ ಹೆಬ್ಬಾರ್ ದೇವರ ಬಲಿ, ಉತ್ಸವ, ಪಾಲಕ್ಕಿ ಬಲಿ, ಕಟ್ಟೆ ಪೂಜೆ, ವಸಂತ ಕಟ್ಟೆ ಪೂಜೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.
15 ಕಿಂತ ಅಧಿಕ ಭಜನಾ ತಂಡಗಳಿಂದ ದೇವಸ್ಥಾನದ ಹೊರಾಂಗಣದಲ್ಲಿ ಭಜನೆ ಕಾರ್ಯಕ್ರಮ ,ಅಷ್ಟ ಸೇವೆ ಜರಗಿತು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದೇವದಾಸ್ ಕಾಪಿಕಾಡ್ ತಂಡದವರಿಂದ ತುಳು ನಾಟಕ ಪ್ರದರ್ಶನಗೊಂಡಿತು.


-ಅಭಿನಂದನೆ ಕಾರ್ಯಕ್ರಮ-
ಸುಮಾರು 8:50 ಲಕ್ಷ ರೂ. ವೆಚ್ಚದ ನೂತನ ಪುಷ್ಪರಥವನ್ನು ದೇವಸ್ಥಾನಕ್ಕೆ ನೀಡಿದ ದಾನಿಗಳಾದ ಸುಕನ್ಯಾ ಮತ್ತು ಜಯರಾಮ್ ರಾವ್ ಹಾಗೂ ಮಕ್ಕಳನ್ನು ಶೋಭಾ ಯಾತ್ರೆ, ಜಾತ್ರೆಯ ಕಾರ್ಯಕ್ರಮಗಳಿಗೆ ಸಹಕರಿಸಿದವರನ್ನು ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.
ಆಡಳಿತಾಧಿಕಾರಿ ನಾಗಶಯನ ರಾವ್ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್, ತುಕಾರಾಂ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್, ನ್ಯಾಯವಾದಿ ಗಣೇಶ ಗೌಡ ,ಬಾಲಚಂದ್ರ ರಾವ್, ವೆಂಕಟರಮಣ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ರವಿಕುಮಾರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!