September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

ಬೆಳ್ತಂಗಡಿ : ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಸಂಪದ ಉಡುಪಿ, ಜೇಸಿಐ ಬೈಂದೂರು ಸಿಟಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನವು ಬೈಂದೂರು ಪೇಟೆಯಲ್ಲಿ ಫೆ. 4 ರಂದು ಆಯೋಜಿಸಲಾಯಿತು. ಬೈಂದೂರು ಸಿಟಿಯ ಜೇಸಿಐ ಅಧ್ಯಕ್ಷರಾಜು ಕೆ. ಮೊಗವೀರರವರು ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾಗಿರುವ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ರಾಜೇಶ್ ರವರು ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಕಲ್ಮಕ್ಕಿ ಸಂತ ಸೆಬಾಸ್ಟಿಯನ್ ಚರ್ಚಿನ ಸಹಾಯಕ ಧರ್ಮಗುರುಗಳಾದ ಫಾ. ಮ್ಯಾಥ್ಯೂ ಮನಪ್ಪಾಟ್ ಹಾಗೂ ಉಡುಪಿ ಸಂಪದ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಸಿಂಥಿಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಉಡುಪಿ ಸಂಪದ ಸಂಸ್ಥೆಯ ಕಾರ್ಯಕರ್ತೆ ಶ್ರೀಮತಿ ಸಿಂಥಿಯಾ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬೈಂದೂರು ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಸ್ವ ಸಹಾಯ ಸಂಘಗಳ ಮಹಿಳೆಯರು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya
error: Content is protected !!